Day: July 2, 2015

ಅಜ್ಜಿ ಮತ್ತು ರಮೇಶ

ಭಾವಶರಧಿ

ಬೆಂಗಳೂರು ಎಂಬ ಮಹಾನಗರದಲ್ಲಿ ಒಂದು ಚಿಕ್ಕ ಕುಟುಂಬ. ಅಪ್ಪ,ಅಮ್ಮ ಇಬ್ಬರು ಮಕ್ಕಳು.

ಅಪ್ಪನದು ಸರ್ಕಾರಿ ನೌಕರಿ. ಅಮ್ಮ House Wife.ಮೊದಲನೇ ಮಗ ರಮೇಶ. ನಗರದ ಪ್ರತಿಷ್ಟಿತ ಐಟಿ ಕಂಪನಿಯಲ್ಲಿ ಅವನಿಗೆ ಮೈತುಂಬ ಕೆಲಸ ಕೈತುಂಬ ಸಂಬಳ. ಎರಡನೇ ಮಗ ಕೃಷ್ಣ. ಸರ್ಕಾರಿ ಕೆಲಸದಲ್ಲಿ ಸಂಬಳ ಜೊತೆ ಗಿಂಬಳವನ್ನೂ ಪಡೆಯುತ್ತಿದ್ದ.

ರಮೇಶ ಸಮಾಜಮುಖಿಯಾಗಿದ್ದ. ದುಡ್ಡಿಗಿಂತ ಗುಣ ,ಸಹಾಯ ಮನೋಭಾವ ಮುಖ್ಯ ಎಂಬ ಅರಿವು ಅವನಿಗಿತ್ತು. ದಾರಿಯಲ್ಲಿ ಭಿಕ್ಷೆ ಬೇಡಿದವರಿಗೆ ಎಂದೂ ದುಡ್ಡಿಲ್ಲ ಎಂದವನಲ್ಲ. ಚಿಲ್ಲರೆ ಇಲ್ಲದದಿದ್ದರೂ ಜೇಬಿನಲ್ಲಿ ಎಷ್ಟು ಇರುತ್ತಿತ್ತೋ ಅಷ್ಟನ್ನೂ ಕೊಡುವಷ್ಟು ಕಲಿಯುಗದ ಕರ್ಣ. ಆದರೆ ಅವನ ತಮ್ಮ ಕೃಷ್ಣ ಅದಕ್ಕೆ ಸ್ವಲ್ಪ ವಿರೋಧ ಸ್ವಭಾವದವನು.ನಾವು ಕಷ್ಟ ಪಟ್ಟು ಬೆವರು ಸುರಿಸಿ ದುಡಿದ ಹಣವನ್ನು ಸಲೀಸಾಗಿ ಮೊತ್ತೊಬ್ಬರಿಗೆ ಭಿಕ್ಷೆ ನೆಪದಲ್ಲಿ ಕೊಡುವವನು ಅವನಾಗಿರಲಿಲ್ಲ. ಅವನದು ತುಂಬಾ ಕ್ಯಾಲ್ಕ್ಯುಲೇಟೆಡ್ ಮೈಂಡ್ .ಹಾಗಂತ ಅವನು ಕೆಟ್ಟವನಾಗಿರಲಿಲ್ಲ ಸಹಾಯ ಮನೋಭಾವ ಕಡಿಮೆ ಅಷ್ಟೇ.

ಅವರಿಬ್ಬರ ನಡುವೆ ಆಗಾಗ ದುಡ್ಡಿನ ಬಗ್ಗೆ ,ಚಾರಿಟಿ ಬಗ್ಗೆ ಚರ್ಚೆಗಳಾಗುತ್ತಿದ್ದವು. ಕೆಲವು ಸಲ ಅವು ವಿಕೋಪಕ್ಕೆ ತಿರುಗಿ ಅಣ್ಣ ತಮ್ಮಂದಿರ ಕಾದಾಟಕ್ಕೂ ಕಾರಣವಾಗಿ ಮನೆಲಿದ್ದ ಕೆಲವು ವಸ್ತುಗಳು ಪುಡಿ ಪುಡಿಯಾಗುತ್ತಿದ್ದವುರಮೇಶ ದಿನವೂ ತನ್ನ ಆಫೀಸಿಗೆ ಹೋಗುವಾಗ ದಾರಿಯಲಿ ಸಹಾಯ ಕೇಳಿದರೆ . ಭಿಕ್ಷೆ ಬೇಡಿದರೆ ಅವರಿಗೆ ಸಹಾಯ ಮಾಡಿ ಹೋಗುತ್ತಿದ್ದ. ತಿಂಗಳಿಗೆ ಸಾವಿರಾರು ಗಳಿಸುವ ನಾವು ದಿನಕ್ಕೆ ಒಂದು ರೂಪಾಯಿಯಾದರೂ ಕೊಟ್ಟು ಮೊತ್ತೊಬ್ಬರ ಒಂದು ಹೊತ್ತಿಗೆ ಆಗದಿದ್ದರೂ ಒಂದು ತುತ್ತಿಗೆ ಆಗುವಷ್ಟು ಸಹಾಯ ಮಾಡುವುದರಲ್ಲಿ ತೃಪ್ತಿ ಇದೆ ಎಂದು ಅವನು ನಂಬಿದ್ದ.

ಈಗೆ…

View original post 362 more words